ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ 11 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಕ್ಸಿಜನ್, ವೆಂಟಿಲೇಟರ್, ಔಷಧಗಳು, ಆಸ್ಪತ್ರೆ ಹಾಸಿಗೆಗಳ ಲಭ್ಯತೆ ಕುರಿತು ಪರಾಮರ್ಶೆ ನಡೆಸಿದ ಕೇಂದ್ರ ಆರೋಗ್ಯ ಸಚಿವರು
ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ 11 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಕ್ಸಿಜನ್, ವೆಂಟಿಲೇಟರ್, ಔಷಧಗಳು, ಆಸ್ಪತ್ರೆ ಹಾಸಿಗೆಗಳ ಲಭ್ಯತೆ ಕುರಿತು ಪರಾಮರ್ಶೆ ನಡೆಸಿದ ಕೇಂದ್ರ ಆರೋಗ್ಯ ಸಚಿವರು ಕೋವಿಡ್-19 ವಿರುದ್ಧದ ಸಮರದಲ್ಲಿ ಭಾರತ ಸರ್ಕಾರದ ನಿರಂತರ ಬೆಂಬಲ ಮುಂದುವರಿಸುವುದಾಗಿ ಭರವಸೆ ಭಾರತ ಸರ್ಕಾರದ ಶ್ರೇಣೀಕೃತ, ಪೂರ್ವಭಾವಿ ಮತ್ತು ಕ್ರಿಯಾಶೀಲ ವಿಧಾನಕ್ಕೆ ಅನುಗುಣವಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್ ಅಧ್ಯಕ್ಷತೆಯಲ್ಲಿಂದು ಇತ್ತೀಚೆಗೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರುಗಳೊಂದಿಗೆ ಸೋಂಕು ತಡೆ, ನಿಯಂತ್ರಣ ಮತ್ತು ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು. ಸಭೆ ಸುಮಾರು 3 ಗಂಟೆಗೂ ಅಧಿಕ ಕಾಲ ನಡೆಯಿತು. ಆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೆಂದರೆ ಮಹಾರಾಷ್ಟ್ರ, ಛತ್ತೀಸ್ ಗಢ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಕೇರಳ, ಪಶ್ಚಿಮಬಂಗಾಳ, ದೆಹಲಿ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶ ಸೇರಿದ್ದು, ಆ ರಾಜ್ಯಗಳಲ್ಲಿ ಹೊಸದಾಗಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಭಾರೀ ಹೆಚ್ಚಳವಾಗಿದೆ.