Posts

Showing posts from May, 2021

ಕೇಂದ್ರ ಸರ್ಕಾರದಿಂದ ಯುವ ಲೇಖಕರ ಮಾರ್ಗದರ್ಶನಕ್ಕೆ ಯುವ-ಪ್ರಧಾನಮಂತ್ರಿಗಳ ಕಾರ್ಯಕ್ರಮ ಆರಂಭ

Image
 ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆ ಇಂದು ಯುವ ಲೇಖಕರಿಗೆ ಮಾರ್ಗದರ್ಶನ ನೀಡುವ ಯುವ-ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ದೇಶದಲ್ಲಿ ಓದುವುದು, ಬರೆಯುವುದು ಮತ್ತು ಪುಸ್ತಕ ಸಂಸ್ಕೃತಿಯನ್ನು ಉತ್ತೇಜಿಸುವುದು ಹಾಗೂ ಭಾರತದ ಬರಹಗಳನ್ನು ಜಾಗತಿಕವಾಗಿ ಜನಪ್ರಿಯಗೊಳಿಸುವುದು, ಭಾರತವನ್ನು ಬಿಂಬಿಸುವ ಉದ್ದೇಶದಿಂದ ಯುವ ಮತ್ತು ಉದಯೋನ್ಮುಖ ಲೇಖಕರಿಗೆ (30 ವರ್ಷದೊಳಗಿನವರು) ತರಬೇತಿ ಮತ್ತು ಮಾರ್ಗದರ್ಶನ ನೀಡುವ ಕಾರ್ಯಕ್ರಮ ಇದಾಗಿದೆ.

12ನೇ ತರಗತಿ ಪರೀಕ್ಷೆಗಳು ಮತ್ತು ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಚರ್ಚಿಸಲು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಾಳೆ ಉನ್ನತ ಮಟ್ಟದ ಸಭೆ

Image
 12ನೇ ತರಗತಿ ಪರೀಕ್ಷೆ ಮತ್ತು ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಪ್ರಸ್ತಾಪಗಳ ಬಗ್ಗೆ ಚರ್ಚಿಸಲು ನಾಳೆ ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಸಚಿವರು, ಶಿಕ್ಷಣ ಕಾರ್ಯದರ್ಶಿಗಳು ಮತ್ತು ರಾಜ್ಯ ಪರೀಕ್ಷಾ ಮಂಡಳಿಗಳ ಅಧ್ಯಕ್ಷರು ಮತ್ತು ಮಧ್ಯಸ್ಥಗಾರರೊಂದಿಗೆ ಉನ್ನತ ಮಟ್ಟದ ವರ್ಚ್ಯುಯಲ್‌ ಸಭೆ ಆಯೋಜಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ, ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್, ಕೇಂದ್ರ ಮಹಿಳಾ ಮತ್ತು ಮಕ್ಕಳ ಸಚಿವೆ ಶ್ರೀಮತಿ ಸ್ಮೃತಿ ಜುಬಿನ್ ಇರಾನಿ ಮತ್ತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.

ರಾಜ್ಯದಲ್ಲಿ ತಕ್ಷಣದ ಪರಿಹಾರ ಕಾರ್ಯಗಳಿಗಾಗಿ 1,000 ಕೋಟಿ ರೂ. ನೆರವು ಘೋಷಿಸಿದ ಪ್ರಧಾನಿ

Image
  ತೌಕ್ತೇ ಚಂಡಮಾರುತದಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದರು. ಗುಜರಾತ್ ಮತ್ತು ದಿಯುನಲ್ಲಿ ಉನಾ (ಗಿರ್ - ಸೋಮನಾಥ್), ಜಾಫ್ರಾಬಾದ್ (ಅಮ್ರೇಲಿ), ಮಾಹುವಾ (ಭಾವನಗರ) ದಲ್ಲಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನಡೆಸಿದರು. ನಂತರ ಅವರು ಗುಜರಾತ್ ಮತ್ತು ದಿಯುನಲ್ಲಿ ಕೈಗೊಳ್ಳುತ್ತಿರುವ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಪರಿಶೀಲಿಸಲು ಅಹಮದಾಬಾದ್ ನಲ್ಲಿ ಸಭೆ ನಡೆಸಿದರು.

ಲಸಿಕಾ ಕಾರ್ಯಕ್ರಮವನ್ನು ಮುಂಚೂಣಿ ಯೋಧರೊಂದಿಗೆ ಪ್ರಾರಂಭಿಸಿದ ಕಾರ್ಯತಂತ್ರವು ಎರಡನೇ ಅಲೆಯಲ್ಲಿ ಪ್ರಯೋಜನ ನೀಡಿದೆ: ಪ್ರಧಾನಿ

Image
 ಕೋವಿಡ್ ಪರಿಸ್ಥಿತಿ ಕುರಿತು ದೇಶಾದ್ಯಂತದ ವೈದ್ಯರ ಗುಂಪಿನೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಕೋವಿಡ್‌ನ ಎರಡನೇ ಅಲೆಯ ಅಸಾಧಾರಣ ಸನ್ನಿವೇಶಗಳ ವಿರುದ್ಧ ವೈದ್ಯಕೀಯ ಸಮುದಾಯ  ಮತ್ತು ಅರೆವೈದ್ಯಕೀಯ ಸಿಬ್ಬಂದಿಯು ನಡೆಸುತ್ತಿರುವ ಅನುಕರಣೀಯ ಹೋರಾಟಕ್ಕೆ ಧನ್ಯವಾದ ತಿಳಿಸಿದ ಪ್ರಧಾನಿಯವರು, ಇಡೀ ದೇಶವು ಅವರಿಗೆ ಋಣಿಯಾಗಿದೆ ಎಂದರು. ಪರೀಕ್ಷೆಗಳು, ಔಷಧಿಗಳ ಪೂರೈಕೆ ಅಥವಾ ದಾಖಲೆಯ ಸಮಯದಲ್ಲಿ ಹೊಸ ಮೂಲಸೌಕರ್ಯಗಳನ್ನು ಸನ್ನದ್ದಗೊಳಿಸುವುದು, ಇವೆಲ್ಲವನ್ನೂ ವೇಗವಾಗಿ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. ಆಮ್ಲಜನಕದ ಉತ್ಪಾದನೆ ಮತ್ತು ಪೂರೈಕೆಯ ಹಲವಾರು ಸವಾಲುಗಳನ್ನು ನಿವಾರಿಸಲಾಗುತ್ತಿದೆ. ಕೋವಿಡ್ ಚಿಕಿತ್ಸೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಪ್ರದೇಶದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಮಾನವ ಸಂಪನ್ಮೂಲ ವೃದ್ಧಿಗೆ ಕೈಗೊಂಡ ಕ್ರಮಗಳು ಆರೋಗ್ಯ ವ್ಯವಸ್ಥೆಗೆ ಹೆಚ್ಚುವರಿ ಬೆಂಬಲವನ್ನು ನೀಡಿವೆ ಎಂದು ಅವರು ಹೇಳಿದರು.