Posts

Showing posts from August, 2021

ಮಾನವ ಕುಲ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ವಿನೂತನ ಪರಿಹಾರ ಒದಗಿಸಲು ಮುಂದಾಗುವಂತೆ ವಿಜ್ಞಾನಿಗಳಿಗೆ ಉಪ ರಾಷ್ಟ್ರಪತಿ ಕರೆ

Image
 ಹವಾಮಾನ ಬದಲಾವಣೆಯಿಂದ ಕೃಷಿ, ಆರೋಗ್ಯ ಮತ್ತು ವೈದ್ಯಕೀಯದವರೆಗೆ ಮಾನವಕುಲ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ವಿಜ್ಞಾನಿಗಳು ವಿನೂತನ ಪರಿಹಾರಗಳನ್ನು ಶೋಧಿಸುವಂತೆ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರು ಇಂದು ಕರೆ ನೀಡಿದ್ದಾರೆ. ಬೆಂಗಳೂರಿನ ಜವಾಹರಲಾಲ್ ನೆಹರೂ ಮುಂದುವರಿದ ವೈಜ್ಞಾನಿಕ ಸಂಶೋಧನಾ ಕೇಂದ್ರ (ಜೆಎನ್.ಸಿ.ಎ.ಎಸ್.ಆರ್) ದಲ್ಲಿ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿಯವರು, ಉತ್ಕೃಷ್ಟತೆಯನ್ನು ಸಾಧಿಸಲು ಮತ್ತು ಜನರ ಜೀವನವನ್ನು ಸುಧಾರಿಸಲು ಸಂಶೋಧನೆಗಾಗಿ ಶ್ರಮಿಸುವಂತೆ ವಿಜ್ಞಾನಿಗಳಿಗೆ ಒತ್ತಾಯಿಸಿದರು. "ವಿಜ್ಞಾನದ ಉದ್ದೇಶ ಜನರ ಜೀವನವನ್ನು ಸಂತೋಷ, ಆರೋಗ್ಯಕರ ಮತ್ತು ಆರಾಮದಾಯಕವಾಗಿ ಮಾಡುವುದಾಗಿದೆ", ಎಂದು ಅವರು ಪುನರುಚ್ಚರಿಸಿದರು.